Wednesday, August 24, 2011

ಹಸಿವು ಕ್ರಾಂತಿ


ಹಸಿವಾಗಿದೆ ಉಸಿರೇರಿದೆ
ಕಾಡಿದೆ ಭಾವ ಬಡತನ,
ಅನ್ಯಾಯದಿ ಮನಗೆಟ್ಟಿದೆ
ಬೇಕಿದೀ ದುರ್ಗತಿ ದಮನ.

ಎಚ್ಚೆದ್ದಿದೆ ಭುಗಿಲೆದ್ದಿದೆ
ಮೈಕೊಡವಿದೆ ಜನಮನ,
ಸಮಚಿತ್ತದೆ ಮುನ್ನುಗ್ಗಿದೆ
ದೇಶ ದೇಶಾಂತರದ ಜನ.

ಭ್ರಷ್ಟಾಳ್ವಿಕೆ ಮಂಪರಿನೆವೆ
ಎಚ್ಚರಿಸಿದೆ ಕ್ರಂದನ,
ಬೆದರಿದಿಂದೆ ರಾಜಕಾರಣೆದೆ
ಕಂಡು ಪ್ರಜೆಗಳೊಮ್ಮನ.

ಬದುಕಿರಲಿ ಎಂದೆಡುವದೆ
ಒಗ್ಗಟ್ಟಿನ ಜನಬಲ,
ನಡೆದಿರಲಿ ತಡೆಯಿರದೆ
ಈ ಸಾತ್ವಿಕ ಚಿಂತನ.